ಕಾಂಗ್ರೆಸ್ ಗೆ ಬಿಗ್ ಶಾಕ್.! "ಕೈ" ಬಿಟ್ಟು ಕಮಲಕ್ಕೆ ಜೈ ಎಂದ ಪ್ರಭಾವಿ ಕಾಂಗ್ರೆಸ್ ಮುಖಂಡ.?

ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲೇ ಇದೀಗ ಕಾಂಗ್ರೆಸ್ ನ ಹಿರಿಯ ಮುಖಂಡ, ಮಾಜಿ ಸಚಿವ ಡಾ.ಎ. ಬಿ. ಮಾಲಕರೆಡ್ಡಿ ಅವರು ಪಕ್ಷಕ್ಕೆ ರಾಜೀನಾಮೆ ನೀಡುವುದರ ಮೂಲಕ ಕಾಂಗ್ರೆಸ್ ಗೆ ಬಿಗ್ ಶಾಕ್ ನೀಡಿದ್ದಾರೆ. ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರವ ಮಾಲಕರೆಡ್ಡಿ ಅವರು ಇಂದು ಬೆಳಗ್ಗೆ ಬಿಜೆಪಿ ಸೇರ್ಪಡೆಯಾಗಲಿದ್ದು, ಈ ಮೂಲಕ ಕಳೆದ ಎರಡು ದಿನಗಳಿಂದ ಮಾಲಕರೆಡ್ಡಿ ಅವರನ್ನು ಬಿಜೆಪಿಗೆ ಕರೆತರಲು ನಡೆಸಿದ ಪ್ರಯತ್ನ ಯಶಸ್ವಿಯಾಗಿದೆ. ಇಂದು ಬೆಂಗಳೂರಿನಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷರಾದ ಬಿ.ಎಸ್.ಯಡಿಯೂರಪ್ಪ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾಲಿದ್ದಾರೆ ಎಂಬುದಾಗಿ ತಿಳಿದುಬಂದಿದೆ. 
ಮೈತ್ರಿ ಸರ್ಕಾರ ಕುರಿತು ಅಸಮಾಧಾನ ವ್ಯಕ್ತಪಡಿಸಿದ ಅವರು, ಯಾದಗಿರಿ ಜಿಲ್ಲೆ ಮತ್ತು ರಾಜ್ಯದಲ್ಲಿ ಜೆಡಿಎಸ್ ​ನವರದ್ದೇ ನಡೆಯುವುದು. ನಾನು ಹಿರಿಯನಾದರೂ ಪಕ್ಷದಲ್ಲಿ ಗೌರವವಿಲ್ಲ. ಜಿಲ್ಲೆಯಲ್ಲಿ ಕಾಂಗ್ರೆಸ್​ ನಾಯಕರ ಮಾತಿಗೆ ಬೆಲೆಯಿಲ್ಲ. ಜಿಲ್ಲೆಯಲ್ಲಿ ನಾವೆಲ್ಲಾ ಹಿರಿಯರು, ರಾಜಕೀಯದಲ್ಲಿ ಚಿಕ್ಕವರಿರುವ ಜೆಡಿಎಸ್​ ನಾಯಕರ ಮುಂದೆ ನಿಲ್ಲಬೇಕಾಗಿದೆ. ಪಕ್ಷದ ರಾಜ್ಯ ನಾಯಕರ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿ ಮಾಡುವ ಉದ್ದೇಶದಿಂದ ನಾನು ಬಿಜೆಪಿ ಸೇರುತ್ತಿದ್ದೇನೆ ಎಂದು ಅವರು ಹೇಳಿದ್ದಾರೆ. 

Comments